ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಿಂದ ಕಲಬುರಗಿಯ ಎಂಟು ಜನರ ದಾರುಣ ಸಾವಾಗಿರುವ ಘಟನೆ ಮಹಾರಾಷ್ಟ್ರದ ಅಕ್ಕಲಕೋಟ ತಾಲ್ಲೂಕಿನ ಶಿರವಾಳ ವಾಡಿಕಲ ಬಳಿ ನಡೆದಿದೆ. ಕ್ರೂಸರ್ ವಾಹನ ಮತ್ತು ಟ್ಯಾಂಕರ್ ನಡುವೆ ನಡೆದ ಅಪಘಾತ ಇದಾಗಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಅಣೂರ ಗ್ರಾಮದ ನಿವಾಸಿಗಳು ಸಾವನ್ನಪ್ಪಿವರು ಎನ್ನಲಾಗಿದೆ. ಮಹಾರಾಷ್ಟ್ರದ ತಿರ್ಥ ಕ್ಷೇತ್ರಗಳಿಗೆ ಪ್ರವಾಸ ತೆರಳಿ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.