![](https://kalyanavoice.com/yfotimpa/2023/08/20230818_202357.jpg?v=1692370516)
ರಾಯಚೂರು : ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಪರಸ್ಪರ ಚಪ್ಪಲಿಯಿಂದ ನರ್ಸ್ ಗಳಿಬ್ಬರು ಹೊಡೆದಾಡಿಕೊಂಡ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಈಚನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್ ಆಗಿರುವ ದೀಪಾ ಎಂಬುವ ನಸ್೯ ಜಾತಿ ನಿಂದನೆ ಮಾಡಿ ಜ್ಯೋತಿ ಎಂಬ ಸ್ಟಾಫ್ ನರ್ಸ್ ಮೇಲೆ ಹಲ್ಲೆ ಮಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ.
ತಮ್ಮ ಕರ್ತವ್ಯದಲ್ಲಿ ಅಡ್ಜಸ್ಟ್ಮೆಂಟ್ ಆಗಲಿಲ್ಲ ಎಂಬ ಕಾರಣಕ್ಕಾಗಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಜ್ಯೋತಿ ಆರೋಪ ಮಾಡಿದ್ದಾರೆ. ಸದ್ಯ ಈ ಕುರಿತು ವಿಡಿಯೋ ವೈರಲ್ ಆಗಿದ್ದು ತಾಲೂಕ ಆರೋಗ್ಯ ಅಧಿಕಾರಿಗಳ ಗಮನಕ್ಕೆ ಬಂದರು ಯಾವುದೇ ಕ್ರಮ ಆಗಿಲ್ಲ ಎಂಬುದು ಸ್ಥಳೀಯರು ಅಸಮಾಧಾನಗೊಂಡಿದ್ದಾರೆ.